ಗುರುವಾರ, ಆಗಸ್ಟ್ 4, 2011

ನಾಡ ಗೀತೆ - ಐದು ಬೆರಳು ಕೂಡಿ ಒಂದು ಮುಷ್ಟಿಯು

ಕವಿ: H S ವೆಂಕಟೇಶ ಮೂರ್ತಿ

ಐದು ಬೆರಳು ಕೂಡಿ ಒಂದು ಮುಷ್ಟಿಯು
ಹಲವು ಮಂದಿ ಸೇರಿ ಈ ಸಮಷ್ಟಿಯು
ಬೇರೆ ಬೇರೆ ಒಕ್ಕಲು ಒಂದೆ ತಾಯ ಮಕ್ಕಳು
ಕೂಡಿ ಹಾಡಿದಾಗ ಗೆಲುವು ಗೀತೆಗೆ ಭರತ ಮಾತೆಗೆ ಭರತ ಮಾತೆಗೆ
ಮೊಳಗಲಿ ಮೊಳಗಲಿ ನಾಡಗೀತವೂ ಮೂಡಲಿ ಮೂಡಲಿ ಸುಪ್ರಭಾತವೂ

ಹಿಮಾಲಯದ ನೆತ್ತಿಯಲ್ಲಿ ಕಾಶ್ಮೀರದ ಬಿತ್ತಿಯಲ್ಲಿ
ಅಸ್ಸಾಮಿನ ಕಾಡಿನಲ್ಲಿ ಐದು ನದಿಯ ನಾಡಿನಲ್ಲಿ
ಹೊತ್ತಿಯುರಿವ ಬೆಂಕಿಯಾರಿ ತಣ್ಣಗಾಗಲಿ
ಬಂಜರಲ್ಲೂ ಹಚ್ಚ ಹಸಿರು ಬೆಳೆದು ತೂಗಲಿ
ಗಂಗೆ ತಂಗಿ ಕಾವೇರಿಯ ತಬ್ಬಿಕೊಳ್ಳಲಿ
ಮೊಳಗಲಿ ಮೊಳಗಲಿ ನಾಡಗೀತವೂ ಮೂಡಲಿ ಮೂಡಲಿ ಸುಪ್ರಭಾತವೂ ||ಐದು ಬೆರಳು||

ಲಡಾಕ್ ಖನೆಫಾ ಗಡಿಗಳಲ್ಲಿ ಯಂತ್ರಾಲಯ ಗುಡಿಗಳಲ್ಲಿ
ಭತ್ತ ಗೋಧಿ ಬೆಳೆಯುವಲ್ಲಿ ಪ್ರೀತಿಯು ಮೈ ತಳೆಯುವಲ್ಲಿ
ದುಡಿವ ಹಿಂದು ಮುಸಲ್ಮಾನರೊಂದುಗೂಡಲಿ
ಆರದಿರಲಿ ಪ್ರೀತಿ ದೀಪ ಕಣ್ಣ ಗೂಡಲಿ
ಎದೆಯ ಕೊಳೆಗಳನ್ನು ಅಶೄ ಧಾರೆ ತೊಳೆಯಲಿ
ಮೊಳಗಲಿ ಮೊಳಗಲಿ ನಾಡಗೀತವೂ ಮೂಡಲಿ ಮೂಡಲಿ ಸುಪ್ರಭಾತವೂ ||ಐದು ಬೆರಳು||

PS: ಇದೂ ನಮ್ ಸ್ಕೂಲ್ ಶನಿವಾರದ ನಾಡಗೀತೆ ಲಿಸ್ಟಲ್ಲಿ ಇತ್ತು :)
ashru(ಅಶೄ) ಸರಿಯಾಗಿ ಟೈಪ್ ಮಾಡ್ಲಿಕ್ಕೆ ಆಗದ್ದಕ್ಕೆ ಕ್ಷಮಿಸಬೇಕು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ